ಎತ್ತಿನಹೊಳೆ ಕುರಿತ ಬೆಂಗಳೂರು ಸಭೆ: ಪಶ್ಚಿಮಘಟ್ಟ ಇನ್ನೂ ಅಪಾಯದತ್ತ?ಮೊನ್ನೆ ಶನಿವಾರ (ತಾ. 19-02-2016) ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಒಂದು ಸಭೆ ಬೆಂಗಳೂರಿನಲ್ಲಿ ನಡೆಯಿತು. ಹಿಂದಿನ ದಿನ ಈ ಸುದ್ದಿಯನ್ನು ಪತ್ರಿಕೆಗಳಲ್ಲಿ ಓದಿದ್ದೆ. ಭಾಗವಹಿಸುವ ತಜ್ಞರ ಹೆಸರುಗಳನ್ನು ಕಂಡು, ಅವರೆಲ್ಲ ಏನು ಹೇಳುತ್ತಾರೆನ್ನುವುದನ್ನು ಕೇಳಲೇಬೇಕು ಅನ್ನಿಸಿದ್ದರಿಂದ ಸಭೆಗೆ ನಾನೂ ಹೋದೆ.ಡಾ. ಮಧುಸೀತಪ್ಪನವರ ಹೆಸರು ಬಯಲುಸೀಮೆಯ “ಶಾಶ್ವತ ನೀರಾವರಿ ಹೋರಾಟ”ಕ್ಕೆ ಬಲವಾಗಿ ತಳುಕು ಹಾಕಿಕೊಂಡಿದೆ. ದ.ಕ.ದ ಭಾಗದಲ್ಲೂ ಎತ್ತಿನಹೊಳೆ ಯೋಜನೆಯ ಕುರಿತ ಹೋರಾಟ, ಅಧ್ಯಯನಗಳಲ್ಲಿ ತೊಡಗಿಕೊಂಡವರಿಗೆ ಅವರ ಹೆಸರು ಪರಿಚಿತವಾದದ್ದು. (ಎತ್ತಿನಹೊಳೆ … Read more