ಮಂಗಳೂರು ವಿಶೇಷ ಆರ್ಥಿಕವಲಯಕ್ಕೆ ನೀರೆಲ್ಲಿಂದ?

ಮಂಗಳೂರಿನಲ್ಲಿ ವಿಶೇಷ ಆರ್ಥಿಕವಲಯ ಸ್ಥಾಪನೆಯಾಗುತ್ತಿದೆ. ಈ ವಲಯದಲ್ಲಿ ಹಲವು ಕೈಗಾರಿಕೆಗಳು ಕಾರ್ಯಾರಂಭ ಮಾಡಲಿವೆಯಂತೆ; ಹಲವು ದೇಶೀ – ವಿದೇಶೀ ಕಂಪೆನಿಗಳು ತಳವೂರಲಿವೆಯಂತೆ; ಮಂಗಳೂರಿನ ಯುವಜನತೆಗೆ ಉದ್ಯೋಗ ನೀಡಲು ಈ ಕಂಪೆನಿಗಳು ಸ್ಪರ್ಧೆ ನಡೆಸಲಿವೆಯಂತೆ. ಇನ್ನೇನು ನಮ್ಮೂರಿನ ಯುವಜನತೆ ಯಾವ ಕೊಲ್ಲಿರಾಷ್ಟ್ರಕ್ಕೂ ಹೋಗಬೇಕಿಲ್ಲ, ಯಾವ ಅಮೆರಿಕಕ್ಕೂ ಹೋಗಬೇಕಿಲ್ಲ. ಅಷ್ಟೇಕೆ ಉದ್ಯೋಗ ಹುಡುಕಿ ಬೆಂಗಳೂರಿಗೂ ಹೋಗಬೇಕಿಲ್ಲ. ಕಾಲುಬುಡದಲ್ಲೇ ಕೇಳಿದ ಉದ್ಯೋಗ! ತಿಂಗಳಿಗೆ ಎಪ್ಪತ್ತು ಎಂಬತ್ತು ಸಾವಿರ ಸಂಬಳ ಲೆಕ್ಕಕ್ಕೇ ಅಲ್ಲವಂತೆ. ಅಷ್ಟು ಕೊಟ್ಟರೂ ಕೆಲಸಕ್ಕೆ ಜನ ಸಿಗದೆ ಹೋಗುವ ಕಾಲ … Read more

ಉಪನ್ಯಾಸಕ ವೇಷದ ಏಜೆಂಟರುಗಳು

ಬಳಕೆದಾರರ ವೇದಿಕೆಯ ಕೆಲಸವನ್ನು ನಾನು ಅಲ್ಪ ಸ್ವಲ್ಪ ಮಾಡುತ್ತೇನೆ. ಇತ್ತೀಚೆಗೆ ಗೃಹಿಣಿಯೊಬ್ಬರು ವೇದಿಕೆಗೆ ಬಂದರು. ಆಕೆ ಪರಿಚಯದವರೇ. ಇದಕ್ಕಿಂತ ಮೊದಲೂ ಒಂದು ಸಲ ಮುಕ್ತ ವಿಶ್ವವಿದ್ಯಾನಿಲಯದಿಂದ ಅಂಕಪಟ್ಟಿ ಬಂದಿಲ್ಲ ಎಂಬ ಸಮಸ್ಯೆಯ ಪರಿಹಾರಕ್ಕಾಗಿ ಬಂದಿದ್ದರು. ಇಂದೂ ಬರುವ ಮೊದಲೇ ಫೋನಿಸಿದ್ದರು. ಹಾಗಾಗಿ ಆಕೆ ಬರುತ್ತಿರುವುದು ಯಾಕೆಂದು ನನಗೆ ಸ್ವಲ್ಪ ಮಟ್ಟಿಗೆ ಅಂದಾಜಿತ್ತು.ಆಕೆ ಎರಡು ಚಿಕ್ಕ ಮಕ್ಕಳ ತಾಯಿ. ಮೊದಲನೆಯ ಹೆಣ್ಣು ಮಗುವಿಗೆ ಈಗ ನಾಲ್ಕು ವರ್ಷ. ಎರಡನೆಯದು ತುಂಬಾ ಚಿಕ್ಕದು.ಆಕೆಯ ಪತಿ ನನಗೆ ಪರಿಚಯದವರೇ. ಅವರಿಗೆ ಪಿತ್ರಾರ್ಜಿತವಾಗಿ … Read more

ಮಾದರಿ-ಪಾದರಿ-ವಿಷಯ

ನಿರೇನ್, ಅಶೋಕವರ್ಧನರ ಜೊತೆ ಬಿಸಿಲೆಯ ಕಾಡಿನಲ್ಲಿ ನಡೆಯುತ್ತಿದ್ದೆ. ಕಾಡಿನಲ್ಲಿ ನಡೆಯುವಾಗ ಮೌನವಾಗಿರುವುದು ನಿರೇನ್ ಕ್ರಮ. ಅವರು ಸ್ವಲ್ಪ ಮುಂದಿದ್ದರು.”ಅಶೋಕರೆ, ಸ್ಯಾಂಪಲ್ ಪದಕ್ಕೆ ಕನ್ನಡದಲ್ಲಿ ಏನು ಹೇಳಬೇಕು?” ನನ್ನ ಪ್ರಶ್ನೆ.”ಮಾದರಿ”-ಅಶೋಕರ ಉತ್ತರ.ನಾನು – ನೀವೂ ಅದೇ ಹೇಳುತ್ತೀರ? ಗಟ್ಟಿಯವರೂ ಅದೇ ಹೇಳಿದರು. ನನಗೆ ಯಾಕೋ ಆ ಪದ ಸಮಾಧಾನವಿಲ್ಲಅಶೋಕ್-ಪದನಿಧಿ ನೋಡಿ.ಪ್ರಶಾಂತ್ ಮಾಡ್ತರ ಪದನಿಧಿ ಆಗಷ್ಟೆ ಬಿಡುಗಡೆ ಆಗಿತ್ತು. ಅಶೋಕರು (ಎಷ್ಟೆಂದರೂ) ಪುಸ್ತಕ ವ್ಯಾಪಾರಿ.ನಾನು-ಅದರಲ್ಲಿ ಕೊಡುತ್ತಾರೆ ಅನ್ನುತ್ತೀರ?ಅಶೋಕ್ – ಕೊಡಬಹುದು(ಕೆಲವು ಕ್ಷಣ ಮೌನವಾಗಿ ನಡೆದೆವು. ನಂತರ ಮುಂದೆ ನಡೆಯುತ್ತಿದ್ದ ಅಶೋಕ್ … Read more

ಲಂಚದ ಕೋಟೆಗೊಂದು ಸಣ್ಣ ಪೆಟ್ಟು

ದೂರದ ದೆಹಲಿಯಲ್ಲಿರುವ ವೈಲಾಯ ದಂಪತಿಗಳು ನನ್ನ ಪತ್ನಿಯ ಹತ್ತಿರದ ಬಂಧುಗಳು. ಅವರ ಇಬ್ಬರು ಗಂಡು ಮಕ್ಕಳೂ ಅಮೆರಿಕಾದಲ್ಲಿದ್ದಾರೆ. ಹಾಗಾಗಿ ವೈಲಾಯ ದಂಪತಿಗಳು ಮತ್ತೆ ಮತ್ತೆ ಅಮೆರಿಕಕ್ಕೆ ಹೋಗಿ ಬರುತ್ತಿರುತ್ತಾರೆ. ಇತ್ತೀಚಿಗೆ ಮುಂಬಯಿಯಲ್ಲಿ ಉಗ್ರರ ದಾಳಿ ನಡೆದ ನಂತರ ಅಂತರರಾಷ್ಟ್ರೀಯ ಪ್ರಯಾಣಿಕರ ದಾಖಲೆಗಳನ್ನು ತಪಾಸಣಾಧಿಕಾರಿಗಳು ತುಂಬಾ ಕಟ್ಟುನಿಟ್ಟಾಗಿ ಪರಿಶೀಲಿಸುತ್ತಿದ್ದಾರಂತೆ. ವೈಲಾಯರ ಪತ್ನಿ ಬಿ.ಸಿ.ರೋಡಿನವರು. ಅವರ ಜನನ ದಾಖಲೆಯನ್ನು ಪಕ್ಕಾ ಮಾಡಿಕೊಳ್ಳುವ ಉದ್ದೇಶದಿಂದ ವೈಲಾಯರು ನಮಗೆ ಒಂದು ಪತ್ರ ಬರೆದು, “ತಾಲೂಕು ಆಫಿಸಿನಿಂದ ಈ ದಾಖಲೆಯನ್ನು ಪಡೆದು ಕಳಿಸಲು ಸಾಧ್ಯವೇ?’ … Read more