ಪಂಪಭಾರತ ಆಶ್ವಾಸ ೪(೪೩-೫೨)

ಉ|| ಸೋಲದೊಳ್‌ ಎಯ್ದೆ ಪೀರ್ವ ತೆಱದಿನ್ ಎಮೆಯಿಕ್ಕದೆ ನೋೞ್ಪ ಕಣ್ಗೆ ಕಣ್‌ ಪೀಲಿವೊಲಾಗೆ ಬಂದು ಪೆಱತೊಂದು ಮನಂಬುಗೆ ಪತ್ತಿ ಚಿತ್ತದೊಳ್| ಕೀಲಿಸೆ ಕಾವನಂಬವಱ ಬಿಣ್ಪಿನೊಳೊಯ್ಯನೆ ಜೋಲ್ದವೋಲೆ ತಾಂ ಬೂಲ ಕರಂಕವಾಹಿನಿಯ ಮೇಲೆ ನೆಱಲ್ದಿರೆ ಬಾಲೆ ಲೀಲೆಯಿಂ ಸೋಲದೊಳ್‌ ಎಯ್ದೆ ಪೀರ್ವ ತೆಱದಿನ್ ಎಮೆಯಿಕ್ಕದೆ ನೋೞ್ಪ ಕಣ್ಗೆ ಕಣ್‌ ಪೀಲಿವೊಲಾಗೆ ಬಂದು ಪೆಱತೊಂದು ಮನಂಬುಗೆ ಪತ್ತಿ ಚಿತ್ತದೊಳ್ ಕೀಲಿಸೆ ಕಾವನಂಬು, ಅವಱ ಬಿಣ್ಪಿನೊಳ್‌ ಒಯ್ಯನೆ ಜೋಲ್ದವೋಲೆ ತಾಂಬೂಲ ಕರಂಕವಾಹಿನಿಯ ಮೇಲೆ ನೆಱಲ್ದಿರೆ ಬಾಲೆ ಲೀಲೆಯಿಂ (ಸೋಲದೊಳ್‌ ಎಯ್ದೆ ಪೀರ್ವ … Read more

ಪಂಪಭಾರತ ಆಶ್ವಾಸ ೪ ಪದ್ಯಗಳು ೩೨ರಿಂದ ೪೨

ಖಪ್ಲು|| ಸಾರ ವಸ್ತುಗಳಿಂ ನೆರೆದಂಭೋರಾಶಿಯೆ ಕಾದಿಗೆ ಕಾವನುಂ ಸೀರಪಾಣಿ ವಿಳಾಸದಿನಾಳ್ದಂ ಚಕ್ರಧರಂ ಬಗೆವಂಗೆ ಸಂ| ಸಾರಸಾರಮಿದೆಂಬುದನೆಂದೆಯ್ತಂದನಸಂಚಳ ಕಾಂಚನ ದ್ವಾರ ಬಂಧುರ ಬಂಧ ಗೃಹೋದ್ಯದ್ದ್ವಾರವತೀಪುರಮಂ ನರಂ|| ೩೨|| ಸಾರ ವಸ್ತುಗಳಿಂ ನೆರೆದ ಅಂಭೋರಾಶಿಯೆ ಕಾದಿಗೆ, ಕಾವನುಂ ಸೀರಪಾಣಿ, ವಿಳಾಸದಿನ್‌ ಆಳ್ದಂ ಚಕ್ರಧರಂ, ಬಗೆವಂಗೆ ಸಂಸಾರಸಾರಂ ಇದು ಎಂಬುದನ್‌ ಎಂದು ಎಯ್ತಂದನ್‌ ಅಸಂಚಳ ಕಾಂಚನ ದ್ವಾರ ಬಂಧುರ ಬಂಧ ಗೃಹೋದ್ಯದ್‌ ದ್ವಾರವತೀಪುರಮಂ ನರಂ ರಸವತ್ತಾದ ವಸ್ತುಗಳಿಂದ ತುಂಬಿದ ಕಡಲೇ ಅಗಳು; ಕಾಯುವವನು ನೇಗಿಲನ್ನು ಹಿಡಿದ ಬಲರಾಮ; ಸೊಗಸಾಗಿ ಆಳುವವನು ಚಕ್ರಪಾಣಿಯಾದ … Read more

ಪಂಪಭಾರತ ಆಶ್ವಾಸ 4 ಪದ್ಯಗಳು 21ರಿಂದ 31

ಪಂಪಭಾರತ ಆಶ್ವಾಸ 4 ಪದ್ಯಗಳು 21ರಿಂದ 31 ಚಂ||    ಇದು ಮಳಯಾಚಳಂ ಮಳಯಜಂ ಮಳಯಾನಿಳನೆಂದು ಪೆಂಪುವೆ ತ್ತುದು ಸಿರಿಕಂಡಮುಂ ಪದೆದು ತೀಡುವ ಗಾಳಿಯುಮಿಲ್ಲಿ ಪುಟ್ಟಿ ಪೋ| ಗದು ಪೊಸ ಸುಗ್ಗಿ ಮೂಗುವಡದಿಲ್ಲಿಯ ಕೋಗಿಲೆ ಬಂದಮಾವು ಬೀ ಯದು ಕುಸುಮಾಸ್ತ್ರನಾಜ್ಞೆ ತವದೆಲ್ಲಿಯುಮಿಲ್ಲಿಯ ನಂದನಂಗಳೊಳ್|| ೨೧|| (ಇದು ಮಳಯಾಚಳಂ, ಮಳಯಜಂ ಮಳಯಾನಿಳನ್‌ ಎಂದು ಪೆಂಪುವೆತ್ತುದು ಸಿರಿಕಂಡಮುಂ, ಪದೆದು ತೀಡುವ ಗಾಳಿಯುಂ; ಇಲ್ಲಿ ಪುಟ್ಟಿ ಪೋಗದು ಪೊಸ ಸುಗ್ಗಿ; ಮೂಗುವಡದು ಇಲ್ಲಿಯ ಕೋಗಿಲೆ; ಬಂದಮಾವು ಬೀಯದು; ಕುಸುಮಾಸ್ತ್ರನ ಆಜ್ಞೆ ತವದು … Read more

ಪಂಪಭಾರತ ಆಶ್ವಾಸ ೪ ಪದ್ಯಗಳು ೧೧-೨೦

    ವ|| ಅಂತಜಾತಶತ್ರು ಶತ್ರುಪಕ್ಷ ಕ್ಷಯಕರ ಕರವಾಳ ದಂಷ್ಟ್ರಾಭೀಳ ಭುಜಂಗಮೂರ್ತಿ ವಿಶ್ವ ವಿಶ್ವಂಭರಾಧಾರಮಪ್ಪರಿಕೇಸರಿಯ ತೋಳ್ವಲದೊಳ್ ರಾಜ್ಯಂಗೆಯ್ಯುತಿರ್ಪನ್ನೆಗಂ ವಿಕ್ರಾಂತತುಂಗನೊಂದೆಡೆಯೊಳಿರ್ಪಿರವಿಂಗುಮ್ಮಳಿಸಿ ದಿಗಂಗನಾ ಮುಖಾವಲೋಕನಂಗೆಯ್ಯಲ್ ಬಗೆದು-   (ಅಂತು ಅಜಾತಶತ್ರು, ಶತ್ರುಪಕ್ಷ ಕ್ಷಯಕರ ಕರವಾಳ ದಂಷ್ಟ್ರಾಭೀಳ ಭುಜಂಗಮೂರ್ತಿ, ವಿಶ್ವ ವಿಶ್ವಂಭರ ಆಧಾರಂ ಅಪ್ಪ ಅರಿಕೇಸರಿಯ ತೋಳ್ವಲದೊಳ್ ರಾಜ್ಯಂಗೆಯ್ಯುತಿರ್ಪ ಅನ್ನೆಗಂ, ವಿಕ್ರಾಂತತುಂಗನ್‌ ಒಂದು ಎಡೆಯೊಳ್‌ ಇರ್ಪ ಇರವಿಂಗೆ ಉಮ್ಮಳಿಸಿ, ದಿಗಂಗನಾ ಮುಖ ಅವಲೋಕನಂಗೆಯ್ಯಲ್ ಬಗೆದು)   ಹಾಗೆ, ಶತ್ರುಗಳೇ ಇಲ್ಲದ ಧರ್ಮರಾಯನು, ಶತ್ರುಗಳ ಪಾಲಿಗೆ, ಸರ್ಪದ ಬಾಯಲ್ಲಿರುವ ಭಯಂಕರ ವಿಷದ ಹಲ್ಲುಗಳಂತಹ … Read more

ಪಂಪಭಾರತ ಆಶ್ವಾಸ ೪ ಪದ್ಯಗಳು ೧ರಿಂದ ೯

ಕಂ||     ಶ್ರೀರಮಣಿಯಂ ದ್ವಿಷದ್ಬಲ ಪಾರಾವಾರದೊಳುದಗ್ರ ಭುಜ ವಿಜಯ ಮಹಾ| ಮೇರುವಿನೆ ಕಡೆದು ಪಡೆದಳ ವಾರುಮನಿೞಿಸಿದುದುದಾತ್ತನಾರಾಯಣನಾ ||೧|| (ಶ್ರೀರಮಣಿಯಂ ದ್ವಿಷದ್ಬಲ ಪಾರಾವಾರದೊಳ್‌ ಉದಗ್ರ ಭುಜ ವಿಜಯ ಮಹಾಮೇರುವಿನೆ ಕಡೆದು ಪಡೆದ ಅಳವು, ಆರುಮನ್‌ ಇೞಿಸಿದುದು ಉದಾತ್ತನಾರಾಯಣನಾ) ಲಕ್ಷ್ಮಿಯನ್ನು ಶತ್ರುಸೈನ್ಯವೆಂಬ ಕಡಲಿನಲ್ಲಿ ತನ್ನ ತೋಳುಗಳೆಂಬ ಮೇರುಪರ್ವತದಿಂದ ಕಡೆದು ಪಡೆದ ಉದಾತ್ತ ನಾರಾಯಣನ (ಅರ್ಜುನನ) ಪರಾಕ್ರಮವು ಯಾರ ಪರಾಕ್ರಮವನ್ನೂ ಕಡಿಮೆ ಮಾಡುವಂತಿತ್ತು. (ಟಿಪ್ಪಣಿ: ಇಲ್ಲಿ ಒಂದನೇ ಆಶ್ವಾಸದ ಮೊದಲನೇ ಪದ್ಯವನ್ನು ನೆನಪಿಸಿಕೊಳ್ಳಬೇಕು. ಅದರಲ್ಲಿ ವಿಷ್ಣುವಿನ ಹೆಸರನ್ನು ನೇರವಾಗಿ ಹೇಳದೆ ಪರೋಕ್ಷವಾಗಿ  … Read more

ಪಂಪಭಾರತ ಆಶ್ವಾಸ ೩ ಪದ್ಯಗಳು ೭೫ರಿಂದ ೮೫

  ವ||ಆಗಳ್ ದ್ರುಪದಂ ಪಚ್ಚೆಯ ನೆಲಗಟ್ಟಿನೊಳಂ ರಾಜಾವರ್ತದ ಕಂಬದೊಳಂ ಪವಳದ ಜಂತೆಯೊಳಂ ಪದ್ಮರಾಗದ ಬೋದಿಗೆಯೊಳಮಿಂದ್ರನೀಲದ ಭದ್ರದೊಳಂ ಕರ್ಕೇತನದ ಜಾಳರಿಗೆಯೊಳಂ ಪಳುಕಿನ ಚಿತ್ರಭಿತ್ತಿಯೊಳಂ ಚಂದ್ರಕಾಂತದ ಚಂದ್ರಶಾಲೆಯೊಳಮೊಪ್ಪುವ ವಿವಾಹಗೇಹಮಂ ಸಮೆಯಿಸಿಯದಱ ನಡುವಣಾರ್ದ್ರಮೃತ್ತಿಕಾವಿರಚಿತಮಪ್ಪ ಚತುರಾಂತರದೊಳ್ ಮುತ್ತಿನ ಚೌಕದ ನಡುವಣ ಚೆಂಬೊನ್ನ ಪಟ್ಟವಣೆಯ ಮೇಗಣ ದುಗುಲದ ಪಸೆಯೊಳ್ ಗುಣಾರ್ಣವನನಾ ದ್ರುಪದಜೆಯನೊಡನೆ ಕುಳ್ಳಿರಿಸಿ ಹಿತ ಪುರೋಹಿತ ಪ್ರಾಜ್ಯಾಜ್ಯಾಹುತಿಹುತ ಹುತವಹಸಮಕ್ಷದೊಳ್ ಕೆಯ್ನೀರೆರೆದು ಪಾಣಿಗ್ರಹಂಗೆಯ್ಸೆ- (ಆಗಳ್ ದ್ರುಪದಂ ಪಚ್ಚೆಯ ನೆಲಗಟ್ಟಿನೊಳಂ, ರಾಜಾವರ್ತದ ಕಂಬದೊಳಂ, ಪವಳದ ಜಂತೆಯೊಳಂ, ಪದ್ಮರಾಗದ ಬೋದಿಗೆಯೊಳಂ, ಇಂದ್ರನೀಲದ ಭದ್ರದೊಳಂ, ಕರ್ಕೇತನದ ಜಾಳರಿಗೆಯೊಳಂ, ಪಳುಕಿನ ಚಿತ್ರಭಿತ್ತಿಯೊಳಂ, … Read more

ಪಂಪಭಾರತ ಆಶ್ವಾಸ ೩ ಪದ್ಯಗಳು ೬೫ರಿಂದ ೭೪

  ವ|| ಆಗಳ್ ದ್ರುಪದಂ ಬದ್ದವಣದ ಪಱೆಗಳಂ ಬಾಜಿಸಲ್ವೇೞ್ದು ಸುರತ ಮಕರ ಧ್ವಜನಂ ದ್ರೌಪದಿಯೊಡನೆ ಸಿವಿಗೆಯನೇಱಿಸಿ ಧೃಷ್ಟದ್ಯುಮ್ನ ಯುಧಾಮನ್ಯೂತ್ತಮೌಜಶ್ಶಿಖಂಡಿ ಚೇಕಿತಾನರೆಂಬ ತನ್ನ ಮಗಂದಿರುಂ ತಮ್ಮಂದಿರುಂಬೆರಸು ನೆಲಂ ಮೂರಿವಿಟ್ಟಂತೆ ಬರೆ ಮುಂದಿಟ್ಟು ಪೊೞಲ್ಗೊಡಗೊಂಡುವರ್ಪುದುಮಿತ್ತ ದುರ್ಯೋಧನಂ ಕರ್ಣ ಶಲ್ಯ ಶಕುನಿ ದುಶ್ಶಾಸನಾದಿಗಳೊಳಾಲೋಚಿಸಿ ಪೇೞಿಮೇಗೆಯ್ವಮೆನೆ ಕರ್ಣನಿಂತೆಂದಂ– (ಆಗಳ್ ದ್ರುಪದಂ ಬದ್ದವಣದ ಪಱೆಗಳಂ ಬಾಜಿಸಲ್‌ ಪೇೞ್ದು, ಸುರತ ಮಕರ ಧ್ವಜನಂ ದ್ರೌಪದಿಯೊಡನೆ ಸಿವಿಗೆಯನ್‌ ಏಱಿಸಿ, ಧೃಷ್ಟದ್ಯುಮ್ನ ಯುಧಾಮನ್ಯು, ಉತ್ತಮೌಜ, ಶಿಖಂಡಿ, ಚೇಕಿತಾನರೆಂಬ ತನ್ನ ಮಗಂದಿರುಂ ತಮ್ಮಂದಿರುಂಬೆರಸು ನೆಲಂ ಮೂರಿವಿಟ್ಟಂತೆ ಬರೆ, ಮುಂದಿಟ್ಟು ಪೊೞಲ್ಗೆ … Read more

ಪಂಪಭಾರತ ಆಶ್ವಾಸ ೩ ಪದ್ಯಗಳು ೫೩ರಿಂದ ೬೪

ಪಂಪಭಾರತ ಆಶ್ವಾಸ ೩ ಪದ್ಯಗಳು ೫೩ರಿಂದ ೬೪   ವ|| ಆಗಳ್ ಪಾಂಡವರ್ ತಮ್ಮಂ ಪೆಱರಱಿಯದಂತು ಬ್ರಾಹ್ಮಣವೇಷದೊಳೆ ಬ್ರಹ್ಮಸಭೆಯೊಳ್ ಬಂದಿರೆ- ಆಗ ಪಾಂಡವರು ತಮ್ಮನ್ನು ಬೇರೆಯವರು ಗುರುತಿಸದಂತೆ ಬ್ರಾಹ್ಮಣವೇಷದಲ್ಲಿ ಬ್ರಾಹ್ಮಣರ ಸಭೆಯಲ್ಲಿ ಬಂದು ಇದ್ದರು.   ಚಂ|| ಇಳೆಯೊಳುದಗ್ರ ವೀರ ಭಟ ತುಂಗ ಮತಂಗಜ ವಾಜಿ ರಾಜಿ ಚೌ ಪಳಿಗೆಗಳೊಳ್ ಧರಾಧರ ಧುರಂಧರ ಬಂಧುರ ರಾಜಕಂ ವಿಯ| ತ್ತಳದೊಳನೇಕ ಕಿಂಪುರುಷ ಕಿನ್ನರ ಖೇಚರ ಸಿದ್ಧ ಬೃಂದಮ ವ್ವಳಿಸಿರೆ ಮೂಱು ಲೋಕಮನೆ ಪೋಲ್ತುದು ಮೂನೆಲೆಯಿಂ ಸ್ವಯಂಬರಂ|| ೫೩ || … Read more

ಪಂಪಭಾರತ ಆಶ್ವಾಸ ೩ ಪದ್ಯಗಳು ೪೩ರಿಂದ ೫೨

ಪಂಪಭಾರತ ಆಶ್ವಾಸ ೩ ಪದ್ಯಗಳು ೪೩ರಿಂದ ೫೨ ಪಂಪಭಾರತ ಆಶ್ವಾಸ ೩ ಪದ್ಯಗಳು ೪೩ರಿಂದ ೫೨ ವ|| ಆಗಿ ಮಱುದಿವಸಂ ನೇಸಱ್ ಮೂಡೆ- ನಂತರ ಮರುದಿನ ನೇಸರು ಮೂಡಲು ಕಂ|| ತಂತಮ್ಮ ರಾಜ್ಯ ಚಿಹ್ನಂ ತಂತಮ್ಮ ಮಹಾ ವಿಭೂತಿ ತಂತಮ್ಮ ಬಲಂ| ತಂತಮ್ಮೆಸೆವ ವಿಳಾಸಂ ತಂತಮ್ಮಿರ್ಪೆಡೆಯೊಳೋಳಿಯಿಂ ಕುಳ್ಳಿರ್ದರ್|| ೪೩|| (ತಂತಮ್ಮ ರಾಜ್ಯ ಚಿಹ್ನಂ, ತಂತಮ್ಮ ಮಹಾ ವಿಭೂತಿ, ತಂತಮ್ಮ ಬಲಂ, ತಂತಮ್ಮ ಎಸೆವ ವಿಳಾಸಂ     ತಂತಮ್ಮ ಇರ್ಪ ಎಡೆಯೊಳ್ ಓಳಿಯಿಂ ಕುಳ್ಳಿರ್ದರ್) ತಾವಿದ್ದ ಜಾಗದಲ್ಲಿ ತಮ್ಮ ರಾಜ್ಯಚಿಹ್ನೆ, … Read more

ಪಂಪಭಾರತ ಆಶ್ವಾಸ ೩ ಪದ್ಯಗಳು ೩೩ರಿಂದ ೪೨

  ಮ|| ತಲೆಯೊಳ್ ಸೀರೆಯನಿಕ್ಕಿ ಕೆಮ್ಮನೆನಿತಂ ಪೂಣ್ದಿರ್ಪಮುಗ್ರಾರಿ ವಂ ಶ ಲತಾವಲ್ಲರಿಗಳ್ಗೆ ದಾವಶಿಖಿವೊಲ್ ಮೆಯ್ದೋಱಿ ತದ್ದ್ರೌಪದೀ| ಲಲನಾವ್ಯಾಜದಿನೀಗಳೊಂದೆ ಪೊೞಲೊಳ್ ಸಂದಿರ್ದ ಭಾಸ್ವತ್ಸುಹೃ ದ್ಬಲಕಂ ಮಾರ್ವಲಕಂ ಗುಣಾರ್ಣವ ಶರಪ್ರಾಗಲ್ಭ್ಯಮಂ ತೋಱುವಂ|| ೩೩|| (ತಲೆಯೊಳ್ ಸೀರೆಯನ್ ಇಕ್ಕಿ ಕೆಮ್ಮನೆ ಎನಿತಂ ಪೂಣ್ದಿರ್ಪಂ? ಉಗ್ರ ಅರಿ ವಂಶ ಲತಾವಲ್ಲರಿಗಳ್ಗೆ ದಾವಶಿಖಿವೊಲ್ ಮೆಯ್ದೋಱಿ ತತ್ ದ್ರೌಪದೀಲಲನಾವ್ಯಾಜದಿನ್ ಈಗಳ್ ಒಂದೆ ಪೊೞಲೊಳ್ ಸಂದಿರ್ದ ಭಾಸ್ವತ್ ಸುಹೃತ್ ಬಲಕಂ, ಮಾರ್ವಲಕಂ, ಗುಣಾರ್ಣವ ಶರಪ್ರಾಗಲ್ಭ್ಯಮಂ ತೋಱುವಂ’) ತಲೆಯ ಮೇಲೆ ಬಟ್ಟೆ ಹೊದ್ದುಕೊಂಡು (ಎಂದರೆ ಗುರುತು ಮರೆಸಿಕೊಂಡು) ಇನ್ನೂ … Read more