ಪಂಪಭಾರತ ಆಶ್ವಾಸ ೨ ಪದ್ಯಗಳು: ೧೮ರಿಂದ ೨೯ ಚಂ|| ಸೊಗಯಿಸೆ ತೊಟ್ಟ ಪೂದುಡುಗೆ ಮೆಲ್ಲೆರ್ದೆಯೊಳ್ ತಡಮಾಡೆ ಗಾಡಿ ದಿ|     ಟ್ಟಿಗಳೊಳನಂಗರಾಗರಸಮುಣ್ಮುವಿನಂ ನಡೆ ನೋಡಿ ನೋಡಿ ತೊ||     ಟ್ಟಗೆ ಕೊಳೆ ಮೇಲೆ ಪಾಯ್ದವಳನಪ್ಪಿದನಾ ವಿಭು ತನ್ನ ಶಾಪಮಂ|     ಬಗೆಯದೆ ಮಿೞ್ತುದೇವತೆಯನೞ್ಕಱಳುರ್ಕೆಯಿನಪ್ಪುವಂತೆವೋಲ್||೧೮||  (ಸೊಗಯಿಸೆ ತೊಟ್ಟ ಪೂದುಡುಗೆ ಮೆಲ್ಲೆರ್ದೆಯೊಳ್, ತಡಂ ಆಡೆ ಗಾಡಿ, ದಿಟ್ಟಿಗಳೊಳ್ ಅನಂಗರಾಗರಸಂ ಉಣ್ಮುವಿನಂ ನಡೆ ನೋಡಿ ನೋಡಿ, ತೊಟ್ಟಗೆ ಕೊಳೆ ಮೇಲೆ ಪಾಯ್ದು ಅವಳನ್ ಅಪ್ಪಿದನ್ ಆ ವಿಭು ತನ್ನ ಶಾಪಮಂ ಬಗೆಯದೆ, ಮಿೞ್ತುದೇವತೆಯನ್  ಅೞ್ಕಱ್  ಅಳುರ್ಕೆಯಿನ್ … Read more

ಪಂಪಭಾರತಂ ಆಶ್ವಾಸ ೨ ಪದ್ಯಗಳು ೧ರಿಂದ ೧೭ ಕಂ|| ಶ್ರೀಗಗಲುರಮಂ ಕೀರ್ತಿ |      ಶ್ರೀಗೆ ದಿಗಂತಮುಮನಹಿತರಂ ಗೆಲ್ವ ಜಯ ||      ಶ್ರೀಗೆ ಭುಜಶಿಖರಮಂ ನೆಲೆ |     ಯಾಗಿಸಿ ನೀಂ ನೆಲಸು ನೇಸಱುಳ್ಳಿನಮರಿಗಾ ||೧|| (ಶ್ರೀಗೆ ಅಗಲು ಉರಮಂ, ಕೀರ್ತಿಶ್ರೀಗೆ ದಿಗಂತಮುಮನ್, ಅಹಿತರಂ ಗೆಲ್ವ ಜಯಶ್ರೀಗೆ ಭುಜಶಿಖರಮಂ ನೆಲೆಯಾಗಿಸಿ, ನೀಂ ನೆಲಸು ನೇಸಱ್ ಉಳ್ಳಿನಂ ಅರಿಗಾ) ಅರಿಗಾ, ನೀನು ಲಕ್ಷ್ಮಿಗೆ ನಿನ್ನ ಹರವಾದ ಎದೆಯನ್ನು, ಕೀರ್ತಿಲಕ್ಷ್ಮಿಗೆ ದಿಗಂತವನ್ನು, ವೈರಿಗಳನ್ನು ಗೆಲ್ಲುವ ಜಯಲಕ್ಷ್ಮಿಗೆ ಎತ್ತರದ ಹೆಗಲನ್ನು ನೆಲೆಯಾಗಿಸಿ, … Read more

ಪಂಪಭಾರತ ಆಶ್ವಾಸ ೧ ಪದ್ಯಗಳು ೧೨೮ರಿಂದ ೧೪೯

ಕಂ|| ಭೀಮಂ ಭಯಂಕರಂ ಪೆಱ |      ತೇ ಮಾತೀ ಕೂಸಿನಂದಮೀತನ ಪೆಸರುಂ ||      ಭೀಮನೆ ಪೋಗೆನೆ ಮುನಿಜನ |      ಮೀಮಾೞ್ಕೆಯಿನಾಯ್ತು ಶಿಶುಗೆ ಪೆಸರನ್ವರ್ಥಂ ||೧೨೮|| (“ಭೀಮಂ ಭಯಂಕರಂ, ಪೆಱತೇ ಮಾತು? ಈ ಕೂಸಿನಂದಂ ಈತನ ಪೆಸರುಂ ಭೀಮನೆ! ಪೋಗು” ಎನೆ ಮುನಿಜನಂ, ಈ ಮಾೞ್ಕೆಯಿನ್ ಆಯ್ತು ಶಿಶುಗೆ ಪೆಸರ್ ಅನ್ವರ್ಥಂ.) ‘ಇವನ ಸ್ವರೂಪವು ಹೆದರಿಕೆ ಹುಟ್ಟಿಸುವಂತಿದೆ! ಬೇರೇನು ಹೇಳುವುದು? ಈತನ ಹೆಸರು ಭೀಮ ಎಂದಾಗಲಿ’ ಎಂದು ಮುನಿಜನರು ಹೇಳಿದರು. ಹೀಗಾಗಿ ಆ … Read more

ಪಂಪಭಾರತ ಆಶ್ವಾಸ ೧ ಪದ್ಯಗಳು ೧೧೫-೧೨೭

ಖಚರ ಪ್ಲುತ|| ತುಂಗ ವನ್ಯ ಮತಂಗಜ ದಂತಾಘಾತ ನಿಪಾತಿತ ಸಲ್ಲಕೀ |      ಭಂಗಮಂ ಮಣಿ ಮೌಕ್ತಿಕ ನೀಳ ಸ್ಥೂಳ ಶಿಲಾ ಪ್ರವಿಭಾಷಿತೋ ||      ತ್ತುಂಗಮಂ ಮುನಿ ಮುಖ್ಯ ಮುಖಾಂಭೋಜೋದರ ನಿರ್ಗತ ಮಂತ್ರ ಪೂ |      ತಾಂಗಮಂ ನೃಪನೆಯ್ದಿದನುದ್ಯಚ್ಛೃಂಗಮನಾ ಶತಶೃಂಗಮಂ ||೧೧೫|| (ತುಂಗ ವನ್ಯ ಮತಂಗಜ ದಂತಾಘಾತ ನಿಪಾತಿತ ಸಲ್ಲಕೀಭಂಗಮಂ, ಮಣಿ ಮೌಕ್ತಿಕ ನೀಳ ಸ್ಥೂಳ ಶಿಲಾ ಪ್ರವಿಭಾಷಿತೋತ್ತುಂಗಮಂ, ಮುನಿ ಮುಖ್ಯ ಮುಖಾಂಭೋಜೋದರ ನಿರ್ಗತ ಮಂತ್ರ ಪೂತಾಂಗಮಂ, ನೃಪನ್ ಎಯ್ದಿದನ್ ಉದ್ಯಚ್ಛೃಂಗಮನ್ ಆ ಶತಶೃಂಗಮಂ.) … Read more

ಪಂಪಭಾರತ ಆಶ್ವಾಸ ೧ ಪದ್ಯಗಳು ೧೦೪ರಿಂದ ೧೧೪

ಪಂಪಭಾರತ ಆಶ್ವಾಸ ೧ ಪದ್ಯಗಳು ೧೦೪ರಿಂದ ೧೧೪ ಕಂ|| ಕೂರಿ[ಸೆ] ಗುರುಶುಶ್ರೂಷೆಯೊ |      ಳಾ ರಾಮನನುಗ್ರ ಪರಶುಪಾಟಿತ ರಿಪು ವಂ ||      ಶಾರಾಮನನಿಷು ವಿದ್ಯಾ |      ಪಾರಗನೆನಿಸಿದುದು ಬಲ್ಮೆ ವೈಕರ್ತನನಾ ||೧೦೪|| ತನ್ನ ಉಗ್ರವಾದ ಕೊಡಲಿಯಿಂದ ವೈರಿಗಳ ವಂಶವನ್ನೇ ನಾಶ ಮಾಡಿದ ಪರಶುರಾಮನಿಗೆ ಪ್ರೀತಿ ಹುಟ್ಟುವಂತೆ ಕರ್ಣನು ಆತನ ಸೇವೆ ಮಾಡಿ ಬಿಲ್ವಿದ್ಯೆಯಲ್ಲಿ ಪಾರಂಗತನಾದನು. (ಕೂರಿಸೆ ಗುರುಶುಶ್ರೂಷೆಯೊಳ್ ಆ ರಾಮನನ್, ಉಗ್ರ ಪರಶುಪಾಟಿತ ರಿಪು ವಂಶಾರಾಮನನ್, ಇಷು ವಿದ್ಯಾ ಪಾರಗನ್ ಎನಿಸಿದುದು ಬಲ್ಮೆ … Read more

ಪಂಪಭಾರತ ಆಶ್ವಾಸ ೧ ಪದ್ಯಗಳು ೮೬-೧೦೩ ವ|| ಅಂತು ದಿವ್ಯ ಸಂಯೋಗದೊಳಿರ್ವರುಂ ಗರ್ಭಮಂ ತಾಳ್ದರ್ ಮತ್ತೊರ್ವ ಮಗನಂ ವರಮಂ ಬೇಡೆಂದಂಬಿಕೆಗೆ ಪೇೞ್ದೊಡಾಕೆಯುಂ ವ್ಯಾಸಭಟ್ಟಾರಕನಲ್ಲಿಗೆ ಪೋಗಲಲಸಿ ತನ್ನ ಸೂೞಾಯ್ತೆಯಂ ತನ್ನವೊಲೆ ಕಯ್ಗೆಯ್ದು ಬರವಂ ಬೇಡಲಟ್ಟಿದೊಡಾಕೆಗೆ ವರದನಾಗಿ ವ್ಯಾಸಮುನೀಂದ್ರಂ ಸತ್ಯವತಿಗಂ ಭೀಷ್ಮಂಗಮಿಂತೆಂದನೆನ್ನ ವರಪ್ರಸಾದ ಕಾಲದೊಳೆನ್ನಂ ಕಂಡಂಬಿಕೆ ಕಣ್ಣಂ ಮುಚ್ಚಿದಳಪ್ಪುದಱಿಂದಾಕೆಗೆ ಧೃತರಾಷ್ಟ್ರನೆಂಬ ಮಗನತ್ಯಂತ ಸುಂದರಾಂಗನಾಗಿಯುಂ ಜಾತ್ಯಂಧನಕ್ಕುಮಂಬಾಲೆ ಮದ್ರೂಪಮಂ ಕಂಡು ಮೊಗಮಂ ಪಾಂಡುರಂ ಮಾಡಿದಳಪ್ಪುದಱಿಂದಾಕೆಗೆ ಪಾಂಡುರೋಗ ಸಂಗತನುಮನೇಕ ಭದ್ರ ಲಕ್ಷಣ ಲಕ್ಷಿತನುಮತ್ಯಂತ ಪ್ರತಾಪನುಮಾಗಿ ಪಾಂಡುರಾಜನೆಂಬ ಮಗನಕ್ಕುಮಂಬಿಕೆಯ ಸೂೞಾಯ್ತೆಯಪ್ಪಾಕೆ ದರಹಸಿತ ವದನಾರವಿಂದೆಯಾಗಿ ಬರವಂ ಕೈಕೊಂಡಳಪ್ಪುದಱಿಂದಾಕೆಯ … Read more

ಪಂಪಭಾರತ ಆಶ್ವಾಸ ೧ ಪದ್ಯಗಳು ೭೫-೮೫ ಉ|| ಅತ್ತ ಸುರೇಶ್ವರಾವಸಥಮಿತ್ತ ಮಹೀತಳಮುತ್ತ ಪನ್ನಗೋ |      ದಾತ್ತ ಸಮಸ್ತ ಲೋಕಮಱಿದಂತಿರೆ ಪೂಣ್ದೆನಗಾಗದಂಗಜೋ ||      ತ್ಪತ್ತಿ ಸುಖಕ್ಕೆ ಸೋಲಲೞಿಗುಂ ಪುರುಷವ್ರತಮೀಗಳಬ್ಬೆಯೆಂ |      ದತ್ತಿಗೆಯೆಂಬ ಮಾತನೆನಗೇನೆನಲಕ್ಕುಮೋ ಪಂಕಜಾನನೇ ||೭೫|| (ಅತ್ತ ಸುರೇಶ್ವರಾವಸಥಂ, ಇತ್ತ ಮಹೀತಳಂ, ಉತ್ತ ಪನ್ನಗೋದಾತ್ತ ಸಮಸ್ತ ಲೋಕಂ ಅಱಿದಂತಿರೆ ಪೂಣ್ದ  ಎನಗೆ, ಆಗದು ಅಂಗಜ ಉತ್ಪತ್ತಿ ಸುಖಕ್ಕೆ ಸೋಲಲ್ ಅೞಿಗುಂ ಪುರುಷವ್ರತಂ ಈಗಳ್ ಅಬ್ಬೆಯೆಂದು  ಅತ್ತಿಗೆಯೆಂಬ ಮಾತನ್ ಎನಗೇನ್ ಎನಲ್ ಅಕ್ಕುಮೋ ಪಂಕಜಾನನೇ?) ಅತ್ತ … Read more

ಪಂಪಭಾರತ ಆಶ್ವಾಸ ೧

ಪಂಪಭಾರತ ಆಶ್ವಾಸ ೧ ಪದ್ಯಗಳು: ೫೯ರಿಂದ ೭೪ ಕಂ|| ಜಳರುಹನಾಭನ ನಾಭಿಯ |      ಜಳ ಬುದ್ಬುದದೊಳಗೆ ಸುರಭಿ ಪರಿಮಳ ಮಿಳಿತೋ ||      ಲ್ಲುಳಿತಾಳಿ ಜಲ[ಜ]ಮಾಯ್ತಾ |      ಜಳ[ಜ]ದೊಳೊಗೆದಂ ಹಿರಣ್ಯಗರ್ಭ ಬ್ರಹ್ಮಂ ||೫೯|| (ಜಳರುಹನಾಭನ ನಾಭಿಯ ಜಳ ಬುದ್ಬುದದೊಳಗೆ ಸುರಭಿ ಪರಿಮಳ ಮಿಳಿತೋಲ್ಲುಳಿತಾಳಿ ಜಲಜಮಾಯ್ತು, ಆ  ಜಳಜದೊಳ್ ಒಗೆದಂ ಹಿರಣ್ಯಗರ್ಭ ಬ್ರಹ್ಮಂ.) ಹೊಕ್ಕುಳುಗಮಲನ (ವಿಷ್ಣುವಿನ) ಹೊಕ್ಕುಳಿನಲ್ಲಿದ್ದ ನೀರಿನ ಗುಳ್ಳೆಯಲ್ಲಿ ಸುರಭಿಯ ಪರಿಮಳದಿಂದ ಕೂಡಿದ, ದುಂಬಿಗಳು ಮುತ್ತಿ ಅಲುಗುತ್ತಿರುವ ಕಮಲವು ಉಂಟಾಯಿತು. ಆ ಕಮಲದಲ್ಲಿ ಹಿರಣ್ಯಗರ್ಭ … Read more

ಪಂಪಭಾರತಂ ಎಂಬ ವಿಕ್ರಮಾರ್ಜುನವಿಜಯಂ ಆಶ್ವಾಸ ೧ ಪದ್ಯಗಳು ೪೪ರಿಂದ ೫೮ ಕಂ|| ರುಂದ್ರಾಂಬೋಧಿಪರೀತ ಮ |      ಹೀಂದ್ರರದಾರಿನ್ನರೀ ನರೇಂದ್ರಂ ಸಾಕ್ಷಾ ||      ದಿಂದ್ರಂ ತಾನೆನೆ ಸಲೆ ನೆಗ |      ೞ್ದಿಂದ್ರೇಂದ್ರನ ತೋಳೆ ತೊಟ್ಟಿಲಾಗಿರೆ ಬಳೆದಂ ||೪೪|| (ರುಂದ್ರ ಅಂಬೋಧಿಪರೀತ ಮಹೀಂದ್ರರ್ ಅದಾರ್ ಇನ್ನರ್? ಈ ನರೇಂದ್ರಂ ಸಾಕ್ಷಾತ್ ಇಂದ್ರಂ ತಾನ್ ಎನೆ ಸಲೆ ನೆಗೞ್ದು, ಇಂದ್ರೇಂದ್ರನ ತೋಳೆ ತೊಟ್ಟಿಲಾಗಿರೆ ಬಳೆದಂ.) ಕಡಲಿನವರೆಗೂ ವ್ಯಾಪಿಸಿರುವ ಈ ಭೂಮಿಯಲ್ಲಿ ಅರಿಕೇಸರಿಯಂಥ ರಾಜರು ಬೇರೆ ಯಾರು ತಾನೇ … Read more

ಪಂಪಭಾರತಂ ಆಶ್ವಾಸ ೧ ಪದ್ಯಗಳು ೧೫-೪೩ ಕಂ|| ಶ್ರೀಮಚ್ಚುಳಕ್ಯ ವಂಶ |      ವ್ಯೋಮಾಮೃತಕಿರಣನೆನಿಪ ಕಾಂತಿಯನೊಳಕೊಂ ||      ಡೀ ಮಹಿಯೊಳಾತ್ಮ ವಂಶ ಶಿ |      ಖಾಮಣಿ ಜಸಮೆಸೆಯೆ ಯುದ್ಧಮಲ್ಲಂ ನೆಗೞ್ದಂ ||೧೫|| (ಶ್ರೀಮತ್ ಚಳುಕ್ಯ ವಂಶ ವ್ಯೋಮ ಅಮೃತ ಕಿರಣನ್ ಎನಿಪ ಕಾಂತಿಯನ್ ಒಳಕೊಂಡು, ಈ ಮಹಿಯೊಳ್ ಆತ್ಮ ಶಿಖಾಮಣಿ ಜಸಂ ಎಸೆಯೆ ಯುದ್ಧಮಲ್ಲಂ ನೆಗೞ್ದಂ.) ಇಲ್ಲಿಂದ ಮುಂದಕ್ಕೆ ಅರಿಕೇಸರಿಯ ವಂಶವೃತ್ತಾಂತ: ಚಾಳುಕ್ಯವಂಶವೆಂಬ ಆಕಾಶಕ್ಕೆ ಚಂದ್ರನಂತೆ, ಆ ವಂಶದ ಶಿಖಾಮಣಿಯಂತೆ, ಈ ಭೂಮಿಯಲ್ಲಿ ಯುದ್ಧಮಲ್ಲನು … Read more