ಎಸ್ ಇ ಝಡ್ ನೇತ್ರಾವತಿಯನ್ನು ತಿರುಗಿಸಲು ಹೊರಟಿದೆಯೇ?

ಮಂಗಳೂರು ವಿಶೇಷ ಆರ್ಥಿಕ ವಲಯದ ವೆಬ್ ಸೈಟನ್ನು ನಾನು ನಿಯಮಿತವಾಗಿ ನೋಡುವುದಿಲ್ಲ. “ವಿಶೇಷ ಆರ್ಥಿಕ ವಲಯಕ್ಕೆ ನೀರೆಲ್ಲಿಂದ?” ಎಂಬ ಲೇಖನ ಬರೆದಾಗ ನೋಡಿದ್ದೆ. ಅಲ್ಲಿ ಕೊಟ್ಟಿದ್ದ ಕೆಲವು ಅಂಕಿಸಂಖ್ಯೆಗಳನ್ನು ಲೇಖನದಲ್ಲಿ ಬಳಸಿಕೊಂಡಿದ್ದೆ. ಅದೇ ನೆನಪಿನ ಮೇಲೆ ಮೊನ್ನೆ “ನಿಮ್ಮ ಕಾನೂನು ನಿಮಗಿರಲಿ……” ಲೇಖನದಲ್ಲಿ “ಕರ್ನಾಟಕ ಸರಕಾರ ದಿನಕ್ಕೆ ೬.೭೫ ಕೋಟಿ ಲೀಟರ್ ನೀರು ಕೊಡಲು ಒಪ್ಪಿಕೊಂಡಿದೆ” ಎಂದು ಬರೆದೆ. ನಿನ್ನೆ ಅಂದರೆ ೧೭-೦೬-೨೦೧೦ರಂದು ಯಾಕೋ ಕಂಪೆನಿಯ ವೆಬ್ ಸೈಟನ್ನು ಪುನಃ ನೋಡಬೇಕಾಯಿತು. ನೋಡಿದರೆ ನೀರಿನ ಕುರಿತಾದ ಕಂಪೆನಿಯ … Read more

ನಿಮ್ಮ ಕಾನೂನು ನಿಮಗಿರಲಿ; ನೀರು, ಭೂಮಿ ನಮಗಿರಲಿ!

ಮಂಗಳೂರು ವಿಶೇಷ ಆರ್ಥಿಕ ವಲಯ ಕಂಪೆನಿಯನ್ನು ಅದರ ನೀರಿನ ವ್ಯವಸ್ಥೆ ಬಗ್ಗೆ ಮಾಹಿತಿ ಕೇಳಿದಾಗ “ಎ ಎಂ ಆರ್ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿತ್ತು. ಒಪ್ಪಂದದ ಪ್ರತಿಯನ್ನು ಕೇಳಿ ನಾನು ಅರ್ಜಿ ಸಲ್ಲಿಸಿದೆ. ಕಂಪೆನಿ ಅದನ್ನು ಕೊಡಲು ನಿರಾಕರಿಸಿತು. ನಾನು ಮಾಹಿತಿ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದೆ. ಮೊನ್ನೆ ೫-೬-೨೦೧೦ರಂದು ಮಡಿಕೇರಿಯಲ್ಲಿ ಮಾಹಿತಿ ಹಕ್ಕು ಆಯೋಗ ಈ ಬಗ್ಗೆ ವಿಚಾರಣೆ ಇಟ್ಟುಕೊಂಡಿತ್ತು. ನಾನು ಹಾಜರಾದೆ. ಕಂಪೆನಿಯ ಪರವಾಗಿ ಯಾರೂ ಬಂದಿರಲಿಲ್ಲ. ಆದರೆ, ಬರಹ ರೂಪದಲ್ಲಿ ಆಯೋಗಕ್ಕೆ … Read more

ಮರಗಳ ಸಂರಕ್ಷಣೆಯ ಕಾನೂನು ಜಾರಿಗೆ ಕೊಡುವ ಪರಿ…….

ಎಪ್ರಿಲ್ ೮ರಂದು “ಅರಣ್ಯ ಇಲಾಖೆ ಅಧಿಕಾರಿಗಳ ಉತ್ತರ ಬಂತು, ಆದರೆ…..” ಎಂಬ ಲೇಖನ ಬರೆದಿದ್ದೆ. ಇದು ಪ್ರಕರಣ ಮುಂದುವರಿದ ಬಗೆ:.ನನ್ನ ಪತ್ರಕ್ಕೆ ಮಂಗಳೂರಿನ ಉ.ಅ.ಸಂ. ಯವರು ಉತ್ತರ ಬರೆಯಲಿಲ್ಲ. ನೆನಪೋಲೆ ಬರೆದೆ. ಪ್ರಯೋಜನವಾಗಲಿಲ್ಲ. “ಉತ್ತರ ಬರೆಯದಿದ್ದರೆ ನಿಮ್ಮ ಮೇಲಧಿಕಾರಿಗಳಿಗೆ ದೂರು ಸಲ್ಲಿಸುವುದು ಅನಿವಾರ್ಯವಾಗುತ್ತದೆ” ಎಂಬ ಎಚ್ಚರಿಕೆ ರವಾನಿಸಿದೆ. ಆದರೂ ಉತ್ತರ ಬರಲಿಲ್ಲ. ಮಂಗಳೂರಿನ ಮಹಾನಗರಪಾಲಿಕೆಯ ವಾಣಿಜ್ಯ ಸಂಕೀರ್ಣದಲ್ಲಿ ಕಛೇರಿ ಇರುವ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಎಲ್ಲಾ ದಾಖಲೆಗಳ ಸಮೇತ ಒಂದು ದೂರು ನೀಡಿ ಯಥಾಪ್ರತಿಯನ್ನು ಉ.ಅ.ಸಂ.ಯವರಿಗೆ ಕಳಿಸಿದೆ. ಇಷ್ಟು … Read more

ತನ್ನ ಶಕ್ತಿ ಗೊತ್ತಿರಲಿಲ್ಲವಂತೆ ಹನುಮಂತನಿಗೆ!

ಬಂಟ್ವಾಳ ತಾಲೂಕಿನ ಮಂಚಿ ಬಿ.ವಿ. ಕಾರಂತರ ಹುಟ್ಟೂರು. ಈ ತಿಂಗಳ ೯,೧೦,೧೧ರಂದು ಅಲ್ಲಿ ಅವರ ನೆನಪಿಗಾಗಿ ಅವರ ಅಭಿಮಾನಿಗಳೆಲ್ಲ ಸೇರಿ ಹಲವು ಕಾರ್ಯಕ್ರಮಗಳನ್ನು ನಡೆಸಿದರು. ನಾನು ಈ ಕಾರ್ಯಕ್ರಮದ ಬಗ್ಗೆ ಹೇಳಲು ಹೊರಟದ್ದಲ್ಲ. ಆ ದಿನ ಶ್ರೀಮತಿ ವೈದೇಹಿಯವರು ವ್ಯಕ್ತಪಡಿಸಿದ ಒಂದು ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಬೇಕೆನ್ನಿಸಿದ್ದರಿಂದ ಈ ಬರಹ.ವೈದೇಹಿಯವರು ಆ ದಿನ ಸಂಜೆಯ ತಮ್ಮ ಭಾಷಣದಲ್ಲಿ ಪ್ರಾಸಂಗಿಕವಾಗಿ ಒಂದು ಮಾತು ಹೇಳಿದರು: “ಎಂಜಿನಿಯರ್ ಎಂದರೆ ಮರಗಳನ್ನು ಕಡಿದು ರಸ್ತೆ ನಿರ್ಮಿಸುವವನಲ್ಲ. ಆ ಕೆಲಸವನ್ನು ಯಾವ ಕಂಟ್ರಾಕ್ಟರ್ ಕೂಡ … Read more

ಅರಣ್ಯ ಇಲಾಖೆಯ ಉತ್ತರ ಬಂತು, ಆದರೆ……

ತಾ. ೧೬-೩-೧೦ರ ನನ್ನ ಪತ್ರಕ್ಕೆ ಮಂಗಳೂರು ಉ.ಅ.ಸಂ.ಯವರು ನನಗೆ ಉತ್ತರಿಸದಿದ್ದರೂ, ತಾ. ೨೦-೩-೧೦ರಂದೇ ಅದನ್ನು ಸುಬ್ರಹ್ಮಣ್ಯ ಉಪವಿಭಾಗದ ಸ.ಅ.ಸಂ.ಯವರಿಗೆ ಕಳಿಸಿಕೊಟ್ಟಿದ್ದಾರೆ. ಎಂದರೆ ನನ್ನ ಪತ್ರ ಅವರಿಗೆ ಮುಟ್ಟಿದ ಒಂದೆರಡು ದಿನಗಳಲ್ಲಿಯೇ ಅದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಅವರಿಗೆ ಅಭಿನಂದನೆಗಳು.ನನ್ನ ನೆನಪೋಲೆ ಹೋದಮೇಲೆ ಅವರು ಸುಳ್ಯದ ಉ.ಸ.ಅ.ಸಂ.ಯವರಿಗೆ ಮತ್ತೊಂದು ಅರೆಸರಕಾರಿ ಪತ್ರ ಬರೆದು ನನಗೆ ಅದರ ಯಥಾಪ್ರತಿಯನ್ನು ಕಳಿಸಿಕೊಟ್ಟಿದ್ದಾರೆ. ಆ ಪತ್ರ ಹೀಗಿದೆ:………”ಮೇಲಿನ ವಿಷಯಕ್ಕೆ ಸಂಬಂಧಿಸಿ ಉಲ್ಲೇಖ(೧)ರ ಈ ಕಾರ್ಯಾಲಯದ ಪತ್ರದ ಕಡೆಗೆ ನಿಮ್ಮ ಗಮನ ಸೆಳೆಯಲಾಗಿದೆ. ಸದ್ರಿ … Read more

ತಾ. ೨-೪-೧೦ಇವೊತ್ತಿನ ಉದಯವಾಣಿಯ ವಾರ್ತೆ:ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ: ಸುಬ್ರಹ್ಮಣ್ಯ ಶ್ರೀಪ್ರಕೃತಿಯಲ್ಲಿ ಭಗವಂತನ ಶಕ್ತಿ ಅಡಗಿದೆ. ಆದುದರಿಂದಾಗಿ ನಮ್ಮ ಹಿರಿಯರು ಪ್ರಕೃತಿಯನ್ನು ಆರಾಧನೆ ಮಾಡುವುದರೊಂದಿಗೆ ಪ್ರಕೃತಿಯ ಸೊಬಗಿನ ನಡುವೆ ಆರಾಧನಾಲಯಗಳನ್ನು ನಿರ್ಮಿಸಿದರು. ನಮ್ಮದು ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ ಎಂದು ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. (ವಾರ್ತೆಯಲ್ಲಿ ಅವರ ಇನ್ನೂ ಕೆಲವು ಅಭಿಪ್ರಾಯಗಳಿವೆ)ಇದೇ ವಾರ್ತೆ ಹೀಗೆ ಮುಂದುವರಿದಿದೆ:…..ವಾಸ್ತು ತಜ್ಞ ಶ್ರೀಕೃಷ್ಣ ಮಹಾಲಿಂಗ ಪ್ರಸಾದ್ ಮುನಿಯಂಗಳ ಮಾತನಾಡಿ ನಮ್ಮ ಪ್ರದೇಶದಲ್ಲಿನ ಬಹುತೇಕ ಶ್ರದ್ಧಾಕೇಂದ್ರಗಳು ಅರಣ್ಯ … Read more

ಜಾಗೆದು ಗುರ್ತೇ ಸಿಕ್ತಿಲ್ಲೆ – ಭಾಗ-೨

ಹಿಂದಿನ ಲೇಖನದಲ್ಲಿ ಮಾಹಿತಿ ಬಂದ ಕೂಡಲೇ ತಿಳಿಸುವುದಾಗಿ ಬರೆದಿದ್ದೆ. ದಿನಾಂಕ ೧೭-೩-೨೦೧೦ರಂದು ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ನನಗೆ ಮಾಹಿತಿ ನೀಡಿದ್ದಾರೆ.ನಾನು ಕೇಳಿದ ಮಾಹಿತಿ ೧: ಗುಡ್ಡವನ್ನು ಸಮತಟ್ಟು ಮಾಡುವಾಗ ಅಲ್ಲಿದ್ದ ಹಲವಾರು ಮರಗಳು ನಾಶವಾಗಿರುವ ಸಾಧ್ಯತೆ ಇದೆ. ಹೀಗೆ ಮರಗಳನ್ನು ನಾಶ ಮಾಡಲು ನಿಮ್ಮ ಇಲಾಖೆ ಅನುಮತಿ ನೀಡಿದೆಯೆ?ಉತ್ತರ:ಸದ್ರಿ ಸ್ಥಳದಲ್ಲಿರುವ ಮರಮಟ್ಟುಗಳನ್ನು ಕಡಿಯಲು ಇಲಾಖಾವತಿಯಿಂದ ಯಾವುದೇ ಅನುಮತಿಯನ್ನು ನೀಡಿರುವುದಿಲ್ಲ.ನಾನು ಕೇಳಿದ ಮಾಹಿತಿ ೨: ನೀಡಿದ್ದರೆ ಅನುಮತಿಯ ಯಥಾಪ್ರತಿಯನ್ನು ನನಗೆ ನೀಡಬೇಕಾಗಿ ಕೋರುತ್ತೇನೆ.ಉತ್ತರ: ಅನುಮತಿ ನೀಡದೇ ಇರುವುದರಿಂದ … Read more

ಜಾಗೆದು ಗುರ್ತೇ ಸಿಕ್ತಿಲ್ಲೆ!

ಕಳೆದ ವರ್ಷ ಪ್ರೇಮಕ್ಕ ಮಂಗಳೂರಿನಿಂದ ನಮ್ಮಲ್ಲಿಗೆ ಬಂದಾಗ ಇವಳ ಹತ್ತಿರ “ರಾತ್ರೆ ಬೆಳ್ಗಾತ ಹೊತ್ತಿಗೆ ಗುಡ್ಡೆನೇ ಇಲ್ಲ ಮಾಡಿಬಿಡ್ತ್ರ್ಯ. ಬೆಳ್ಗಾತ ಕಂಡ್ರೆ ಜಾಗೆದು ಗುರ್ತೇ ಸಿಕ್ತಿಲ್ಲೆ, ಹಂಗಾಗಿರ್ತ್” ಅಂದಿದ್ದರು. ಜೆಸಿಬಿಗೆ ಗುಡ್ಡ, ಕಣಿವೆಗಳನ್ನು ಕಂಡರಾಗುವುದಿಲ್ಲ. ಸಾವಿರಾರು ಜೆಸಿಬಿಗಳು ದಕ್ಷಿಣ ಕನ್ನಡವನ್ನು ಬಯಲು ಸೀಮೆ ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿವೆ. ಗುಡ್ಡೆ ತಟ್ಟು ಮಾಡುವುದು ಸೈಟು ಮಾಡಿ ಮಾರುವುದು, ಸೈಟು ಕೊಂಡವರು ನೀರಿಗೆಂದು ಬೋರು ಹಾಕುವುದು.ದಕ್ಷಿಣ ಕನ್ನಡದ ಜೀವ ಇರುವುದೇ ಇಲ್ಲಿನ ಗುಡ್ಡಬೆಟ್ಟಗಳಲ್ಲಿ, ಸುಂದರವಾದ ಕಣಿವೆಗಳಲ್ಲಿ, ಇದನ್ನು ಯಾವ … Read more

ಕಸ ವಿಲೇವಾರಿಯ ಕಗ್ಗಂಟು

“ಆಧುನಿಕ”ವೆಂದು ಕರೆಸಿಕೊಳ್ಳುವ ಯಾವುದೇ ದೊಡ್ಡ ಊರಿಗೆ ನೀವು ಹೋಗಿ, ಇಡೀ ಊರಿನ ಗಾಳಿಯಲ್ಲಿ ಒಂದು ವಿಶಿಷ್ಟ ದುರ್ನಾತ ಹಾಸುಹೊಕ್ಕಾಗಿ ತುಂಬಿ ತುಳುಕುತ್ತಿರುತ್ತದೆ. ಈ ದುರ್ನಾತದ ಕಾಯಿಲೆ ಇತ್ತೀಚೆಗೆ ನಮ್ಮ ಬಿ.ಸಿ.ರೋಡಿನಂಥ ಸಣ್ಣ ಊರುಗಳಿಗೂ ಹಬ್ಬುತ್ತಿದೆ. ಮೊನ್ನೆ ಮೊನ್ನೆ ತಮಿಳುನಾಡಿನ ತಿರುಚ್ಚಿಗೆ ಹೋಗುವ ಪ್ರಸಂಗ ಬಂದಿತ್ತು. ಊರು ಶುರುವಾದಕೂಡಲೇ, ಇಡೀ ಊರಿನ ಎಲ್ಲರ ಮನೆಗಳಲ್ಲೂ ಏಕಕಾಲದಲ್ಲಿ ಮೂಲಂಗಿ ಹುಳಿ ಮಾಡುತ್ತಿದ್ದಾರೇನೋ ಎಂಬಂಥ ಉಸಿರು ಕಟ್ಟಿಸುವ ದುರ್ನಾತ. ಆದರೆ ಆ ಊರೊಳಗಿನ ಯಾರಿಗೂ ಈ ನಾತದ ಅರಿವೇ ಇದ್ದಂತೆ ಕಾಣಲಿಲ್ಲ! … Read more

ಮಂಗಳೂರು ವಿಶೇಷ ಆರ್ಥಿಕ ವಲಯಕ್ಕೆ ನೀರು: ಮಾಹಿತಿ ಸಂಗ್ರಹದ ಒದ್ದಾಟ-ಗುದ್ದಾಟ- ಭಾಗ ೨

ಕಾರ್ಪೋರೇಟ್ ಕಂಪೆನಿಗಳು ತಮ್ಮ ಕೆಲಸವನ್ನು ತುಂಬಾ ವ್ಯವಸ್ಥಿತವಾಗಿಯೂ, ನಿಖರವಾಗಿಯೂ ಮಾಡುತ್ತವೆ, ಖಚಿತವಾದ ಪೂರ್ವ ಲೆಕ್ಕಾಚಾರ ಇಲ್ಲದೆ ಯಾವ ವ್ಯವಹಾರಕ್ಕೂ ಮುಂದುವರಿಯುವುದಿಲ್ಲ ಎಂದೆಲ್ಲ ನಾನು ಭಾವಿಸಿದ್ದೆ. ಆದರೆ ಮಂಗಳೂರು ವಿಶೇಷ ಆರ್ಥಿಕ ವಲಯ ಕಂಪೆನಿಯು ನನ್ನ ನಂಬಿಕೆ ಬುಡಭದ್ರವಿಲ್ಲದ್ದು ಎಂದು ಸಾಧಿಸಿ ತೋರಿಸಿದೆ.ಹಿಂದಿನ ನನ್ನ ಲೇಖನದಲ್ಲಿ ಎಂ ಎಸ್ ಇ ಝಡ್ ವಿರುದ್ಧ ಮಾಹಿತಿ ಹಕ್ಕು ಆಯುಕ್ತರಿಗೆ ದೂರು ಸಲ್ಲಿಸಿದ ವಿಷಯ ಹೇಳಿದ್ದೆ. ತಾ. ೧೭-೧೨-೨೦೦೯ರಂದು ಕಂಪೆನಿ ನಾನು ಕೇಳಿದ ಮೂರು ಮಾಹಿತಿಗಳಲ್ಲಿ ಎರಡನ್ನು ಕೊಟ್ಟು, ಕೊಳಚೆ ನೀರು … Read more